January 30, 2026
IMG-20250129-WA0232.jpg

ಸಾಲಿಗ್ರಾಮ (ಮೈಸೂರು ಜಿಲ್ಲೆ ): ಮಕ್ಕಳ ಜ್ಞಾನಾರ್ಜನೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಹೇಳಿದರು.

ಅವರು ಪಟ್ಟಣದ ಶ್ರೀ ಭೈರವೇಶ್ವರ ಇಂಟರ್ನ್ಯಾಷನಲ್ ಸ್ಕೂಲ್ ಅಲ್ಲಿ ಆಯೋಜಿಸಿದ್ದ ವಿಜ್ಞಾನದ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಬಾಲ್ಯದ ಸಮಯದಲ್ಲಿಯೇ ಪರಿಸರ, ಆರೋಗ್ಯ, ಆಹಾರ, ಕುಡಿಯುವ ನೀರು, ರಸ್ತೆ, ಕಾಡು, ರಸ್ತೆಗಳ ನಿಯಮ, ವಿದ್ಯುತ್, ಆಸ್ಪತ್ರೆ, ಶಾಲೆ ಸೇರಿದಂತೆ ವಿವಿಧ ವಿಷಯಗಳುಳ್ಳ ಮಾಡೆಲ್ ಗಳನ್ನು ಮಾಡಿಕೊಂಡು ಬಂದು ವಿಜ್ಞಾನದ ವಸ್ತು ಪ್ರದರ್ಶನದಲ್ಲಿ ಮಕ್ಕಳು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುವುದರ ಜೊತೆಗೆ ತಾವು ಮಾಡಿರುವ ಮಾಡೆಲ್ ಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಶ್ರೀ ಭೈರವೇಶ್ವರ ವಿದ್ಯಾ ಸಂಸ್ಥೆಯು ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಪೂರಕವಾದ ವಿವಿಧ ಮಾದರಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಉತ್ತಮ ವಿದ್ಯಾರ್ಥಿಗಳನ್ನು ತಯಾರು ಮಾಡುವುದರೊಂದಿಗೆ ಇತರೆ ಶಾಲೆಗಳಿಗೆ ಮಾದರಿಯಾದ ಶಾಲೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಉತ್ತಮವಾಗಿ ಮಾಡಲ್ ಗಳನ್ನು ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ಎಸ್.ಕೆ.ರಮೇಶ್, ಕಾರ್ಯದರ್ಶಿ ಸಿ.ಪಿ.ತ್ರಿವೇಣಿ, ಸಂಯೋಜಕಿ ಅರ್ಪಿತ ಸೇನ್, ಮುಖ್ಯೋಪಾಧ್ಯಾಯನಿ ಯಶಸ್ವಿನಿ, ಪತ್ರಕರ್ತ ಬಸವರಾಜ್, ಶಿಕ್ಷಕರುಗಳು, ವಿದ್ಯಾರ್ಥಿಗಳು, ಪೋಷಕರುಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading