
ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯ ನೆಹರು ನಗರ ನಿವಾಸಿ, ಪತ್ರಕರ್ತ ಚನ್ನಬಸವಯ್ಯ(46) ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಚನ್ನಬಸವಯ್ಯ ಅವರ ಇಚ್ಚೆಯಂತೆ, ಪಾರ್ಥೀವ ಶರೀರವನ್ನು ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾನವಾಗಿ ನೀಡಲಾಯಿತು
ಪತ್ರಿಕೋದ್ಯಮ ಹಾಗೂ ಕಾನೂನು ಪದವಿ ಪಡೆದಿದ್ದ ಚನ್ನಬಸಯ್ಯ ಆಕಾಶವಾಣಿ, ಡಿಡಿ ವಾಹಿನಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಮೇ.28 ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ನಿಧನ ಹೊಂದಿದರು.
ಮೃತರು ತಾಯಿ, ಸಹೋಧರ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.
ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿ, ಪತ್ರಕರ್ತರ ಸಂಘದ ಸದ್ಯರಾಗಿದ್ದ ಚನ್ನಬಸವಯ್ಯ ಅವರ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.
About The Author
Discover more from JANADHWANI NEWS
Subscribe to get the latest posts sent to your email.