ಚಳ್ಳಕೆರೆ ಅ.29.ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದ ನಿಮಿತ್ತ ನರೇಗಾ ಯೋಜನೆಯ 2025- 26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು’ ಎಂದು ತಾಪಂ ಶಶಿದರ್ ಕಿವಿ ಮಾತು ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಿಡಿಒ.ತಾಂತ್ರಿಕ ಅಧಿಕಾರಿ. ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ನರೇಗಾ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಆನ್ ಲೈನ್ ನರೇಗಾ ಕ್ರಿಯಾ ಯೋಜನೆ ರಯಾರಿಸುವ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮಪಂಚಾಯಿತಿ ವ್ಯಾಪ್ತಿಯ ಮನೆ, ಮನೆಗೆ ಭೇಟಿ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ನರೇಗಾ ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜನತೆ ಜಾಬು ಕಾರ್ಡ್ ಹೊಂದಿದ ಕೂಲಿ ಕಾರ್ಮಿಕರಿಗೆ ಕೆಲಸ ಕೊಡ ಬೇಕು.
ರೈತರ ವೈಯುಕ್ತಿಕ ಕಾಮಗಾರಿ. ಕೆರೆ ಕಾಲುವೆ ಹೂಳೆತ್ತುವ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ಮಾಡಿ ಗ್ರಾಮಸಭೆ. ವಾರ್ಡ್ ಸಭೆ ಮಾಡುವ ಮೂಲಕ ಕಾಮಗಾರಿಗಳ ಬೇಡಿಕೆಯನ್ನು ಆನ್ ಲೈನ್ ಕ್ರಿಯಾ ಯೋಜನೆ ತಯಾರಿಸುವಂತೆ ತಿಳಿಸಿದರು.






ನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಮಾತನಾಡಿ ಇನ್ನುಮುಂದೆ ಪದೆ ಪದೇ ಮಾಡಿದ ಕಾಮಗಾರಿಗಳನ್ನು ಮಾಡಲು ಕಡಿವಾಣ ಹಾಕಿದಂತಾಗುತ್ತದೆ. ಕಾಮಗಾರಿಯ ಅಂದಾಜು ಮೊತ್ತ ಆನ್ ಲೈನ್ ನಲ್ಲೇ ಎಂಟ್ರಿಯಾಗಲಿದೆ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ಕ್ರಿಯಾ ಯೋಜನೆ ಪಟ್ಟಿ ತಯಾರಿಸಿ ಅಗತ್ಯವಿರುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಅಭಿಯಾನದಡಿ ಹಾಗೂ ಗ್ರಾಮ ಪಂಚಾಯತಿ, ನ್ಯಾಯಬೆಲೆ ಅಂಗಡಿ, ಹಾಲಿನ ಕೇಂದ್ರ, ಗ್ರಂಥಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಲ್ಲಿಸಿದ ಬೇಡಿಕೆಗಳನ್ನು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು, 2025-26 ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯಲಾಗುತ್ತದೆ. ಪ್ರತಿಯೊಬ್ಬರೂ ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನ ಜನರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಕಾರ್ಯಗಾರದಲ್ಲಿ,ತಾಲ್ಲೂಕು ಅನುಷ್ಠಾನ ಇಲಾಖೆಯ ಅಧಿಕಾರಿಗಳು,ತಾಂತ್ರಿಕ ಸಹಾಯಕರು,ಭಿ.ಎಪ್.ಟಿ,ಗ್ರಾಮ ಸಹಾಯಕ ಮಿತ್ರ ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿಯವರು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.