July 31, 2025
1753880711887.jpg

ಚಳ್ಳಕೆರೆ: ತಂಬಾಕು ಕಾರ್ಯಾಚರಣೆ ಜಾಗೃತಿ


ಚಳ್ಳಕೆರೆ ಜುಲೈ30:
ಚಳ್ಳಕೆರೆ ತ

ಬಸ್ ನಿಲ್ದಾಣದ ಹಿಂಭಾಗದಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಬುಧವಾರ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ತಂಬಾಕು ಕಾರ್ಯಾಚರಣೆ ಜಾಗೃತಿ ಮೂಡಿಸಲಾಯಿತು.
ಯುವ ಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ ತಂಬಾಕು ಕಾರ್ಯಾಚರಣೆಯನ್ನು ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿಯನ್ನು ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 19 ಕೇಸುಗಳನ್ನು ದಾಖಲಿಸಿ ರೂ. 1750 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 07 ಕೇಸುಗಳನ್ನು ದಾಖಲಿಸಿ ರೂ. 550 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ವಿಶ್ವ, ಚಳ್ಳಕೆರೆ ನಗರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿಳಾದ ಟಿ.ರುದ್ರಮುನಿ, ಎಸ್.ವಿ.ಸಾಗರ್ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading