ಕನ್ನಡ ಜೋತಿರಥಯಾತ್ರೆಯನ್ನು ಬುಧವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ ತಹಸಿಲ್ದಾರ್ ರೇಹಾನ್ ಪಾಷಾ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ ಶಿವಸ್ವಾಮಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಉಪಾಧ್ಯಕ್ಷೆ ಸರ್ವ ಮಂಗಳ ಉಮಪತಿ ಪಟ್ಟಣ ಪಂಚಾಯತಿ ಸದಸ್ಯರು ಸ್ವಾಗತಿಸಿದರು.
ನಾಯಕನಹಟ್ಟಿ:: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ಬುಧವಾರ ಬೆಳಿಗ್ಗೆ 11 ಗಂಟೆಗೆ ನಾಯಕನಹಟ್ಟಿಗೆ ಬಂದಿತು.
ಚಳ್ಳಕೆರೆ ತಾಸಿಲ್ದಾರ್ ರೇಹಾನ್ ಪಾಷಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ಕನ್ನಡ ಬಾವುಟ ಬಿಸಿ ಭುವನೇಶ್ವರಿಗೆ ಪುಷ್ಪಮಾಲೆಯನ್ನು ಹಾಕಿ ರಥಯಾತ್ರೆಯನ್ನು ಸ್ವಾಗತಿಸಿದರು.


ಇದೆ ವೇಳೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಂ ಶಿವಸ್ವಾಮಿ ಮಾತನಾಡಿದರು ಕನ್ನಡ ರಥಯಾತ್ರೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಸಂಚರಿಸಿ 17ನೇ ಜಿಲ್ಲೆ ಚಿತ್ರದುರ್ಗಕ್ಕೆ ಆಗಮಿಸಿದೆ.
ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಸಂಚಾರ ಮಾಡಲಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರೂ ಬನ್ನಿ ರಾಜ್ಯ ಸರ್ಕಾರದ ಪರವಾಗಿ ಅಧಿಕೃತವಾಗಿ ಆಹ್ವಾನವನ್ನು ನೀಡಲು ಕನ್ನಡ ರಥಯಾತ್ರೆ, ಇಡೀ ರಾಜ್ಯದಾದ್ಯಂತ ಸಂಚಾರ ಮಾಡಲಿದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಶಿರೆಸ್ತದಾರ ಸದಾಶಿವಯ್ಯ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಉಪಾಧ್ಯಕ್ಷೆ ಸರ್ವಮಂಗಳ ಉಮಾಪತಿ, ಜೆ.ಆರ್. ರವಿಕುಮಾರ್, ಮುಖ್ಯ ಅಧಿಕಾರಿ ಓ. ಶ್ರೀನಿವಾಸ್, ಕಂದಾಯ ನಿರೀಕ್ಷಕ ಚೇತನ್ ಕುಮಾರ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶ್ರೀಕಾಂತ್, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಹೋಬಳಿ ಘಟಕ ಅಧ್ಯಕ್ಷ ಪಿ. ಮುತ್ತಯ್ಯ, ಉಪಾಧ್ಯಕ್ಷ ರಾಘವೇಂದ್ರ ,ನಗರ ಘಟಕ ಅಧ್ಯಕ್ಷ ತಿಪ್ಪೇಸ್ವಾಮಿ, ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ 2 ಕೆ ಶಿವಕುಮಾರ್ , ಠಾಣೆಯ ಸಿಬ್ಬಂದಿ ಮಂಜುನಾಥ್, ಅಣ್ಣಪ್ಪ, ಪಟ್ಟಣ ಪಂಚಾಯತಿ ಸಿಬ್ಬಂದಿಗಳಾದ ದ್ವಿತೀಯ ದರ್ಜೆ ಸಹಾಯಕ ಸುರೇಶ್, ಟಿ. ತಿಪ್ಪೇಸ್ವಾಮಿ, ನಾಯಕನಹಟ್ಟಿ ಸಿ ಆರ್ ಪಿ ಈಶ್ವರಪ್ಪ, ಪಟ್ಟಣದ ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಂಗನವಾಡಿ ಶಿಕ್ಷಕಿಯರು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.