
ನಾಯಕನಹಟ್ಟಿ:: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಓ. ದಾಸಯ್ಯ ಹೇಳಿದರು.
ಗುರುವಾರ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗಜ್ಜುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಶಿಕ್ಷಕ ಎಂ. ಆರ್. ಸ್ವಾಮಿನಾಥ್ ವಯೋ ನಿವೃತ್ತಿ ಬಿಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದ ಒಬ್ಬ ಶಿಕ್ಷಕ ತಮ್ಮ ಜವಾಬ್ದಾರಿಯನ್ನು ಹರಿದು ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಅದೇ ಒಬ್ಬ ಶಿಕ್ಷಕ ತಮ್ಮ ಜವಾಬ್ದಾರಿಯನ್ನು ಮರೆತು ತಪ್ಪು ಮಾಡಿದರೆ ಮಕ್ಕಳು ತಪ್ಪು ದಾರಿ ತುಳಿಯುತ್ತಾರೆ ಎಂಬುದಕ್ಕೆ ತಾವು ಮತ್ತು ತಮ್ಮ ಶಿಕ್ಷಕರ ಇಂಥ ವೃತ್ತಿಯಲ್ಲಿ ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಶಿಕ್ಷಕರ ಬದುಕು ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.
ಇದೆ ವೇಳೆ ನಿವೃತ್ತಿ ಪಡೆದ ಎಂ.ಆರ್ ಸ್ವಾಮಿನಾಥ್ ಮಾತನಾಡಿದರು ಶಿಕ್ಷಕರ ವೃತ್ತಿ ಶ್ರೇಷ್ಠವಾದ ವೃತ್ತಿ ಈವೃತ್ತಿಯಲ್ಲಿ ನನಗೆ ಸಂತಸ ತಂದಿದೆ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಂಸ್ಕಾರವಂತರಾಗಿ ಹೆತ್ತವರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಹಾಗೆ ಶಿಕ್ಷಣವನ್ನು ಪಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ ಸದಸ್ಯೆ ಪಾಲಮ್ಮ ಜಿ. ಬೋರಯ್ಯ, ಬಸಕ್ಕ ತಿಪ್ಪೇಸ್ವಾಮಿ, ಶಾಲೆಯ ಮುಖ್ಯ ಶಿಕ್ಷಕ ಬೊಮ್ಮಲಿಂಗಯ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸಿ ಹನುಮಂತಪ್ಪ, ನಾಯಕನಹಟ್ಟಿ ಹೋಬಳಿ ಅಧ್ಯಕ್ಷ ಬಿ ಎಚ್ ತಿಪ್ಪೇರುದ್ರಪ್ಪ, ಗ್ರಾಮದ ಯುವ ಮುಖಂಡ ಜಿ ಜಿ.ಎಸ್. ತಿಪ್ಪೇಸ್ವಾಮಿ, ಶಾಲೆಯ ಶಿಕ್ಷಕರಾದ ಜಿ.ಒ. ನಾಗರಾಜ್, ಡಿ.ಸಿ. ಪಾಟೀಲ್, ಪೆನೋಬಳಿ, ಡಿಎಸ್ಎಸ್ ಸಂಚಾಲಕ ಜಿ.ಬಿ.ತಿಪ್ಪೇಸ್ವಾಮಿ, ಸೇರಿದಂತೆ ಸಮಸ್ತ ಗಜ್ಜುಗಾನಹಳ್ಳಿ ಗ್ರಾಮಸ್ಥರು ಶಾಲೆಯ ಅಡಿಗೆ ಸಿಬ್ಬಂದಿಗಳು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.