ಚಿತ್ರದುರ್ಗ ಅ. 31
ಭಾರತದ ಸ್ವಾತಂತ್ರ ಹೋರಾಟದಲ್ಲಿ ಹಾಗೂ ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ರವರ 150 ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಯ ಸಂದೇಶ ಸಾರಲು ನ. 12 ರಂದು ಬೆಳಿಗ್ಗೆ 08 ಗಂಟೆಗೆ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೂ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಅವರು ಮನವಿ ಮಾಡಿದರು.
ನಗರದ ಸಂಸದರ ಕಚೇರಿ ಬಳಿಯ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ಪ್ರಥಮ ಉಪಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ರವರ 150 ನೇ ಜನ್ಮದಿನಾಚರಣೆಯನ್ನು ಸರ್ಕಾರ ದೇಶಾದ್ಯಂತ ಒಂದು ಅಭಿಯಾನದ ರೀತಿಯಲ್ಲಿ ಆಚರಿಸಲು ಸಿದ್ಧತೆ ನಡೆಸಿದೆ. ಅಭಿಯಾನವನ್ನು ಕಳೆದ ಅಕ್ಟೋಬರ್ 6 ರಂದು ಈಗಾಗಲೆ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ: ಮನ್ಸುಖ್ ಮಾಂಡವೀಯ ರವರು ಉದ್ಘಾಟಿಸಿದ್ದಾರೆ.
ಛಿದ್ರಗೊಂಡ ಭಾರತವನ್ನು ಏಕೀಕರಣಗೊಳಿಸಲು ಹೋರಾಡಿದ ವ್ಯಕ್ತಿಗೆ ಗೌರವ ಸಲ್ಲಿಸಲು ಇದು ನಮ್ಮೆಲ್ಲರಿಗೂ ಒಂದು ಉತ್ತಮ ಅವಕಾಶವಾಗಿದೆ. ಸರ್ದಾರ್ ಪಟೇಲ್ರವರು ಭಾರತದ ಉಕ್ಕಿನ ಮನುಷ್ಯ ಎಂದು ಜನಜನಿತವಾಗಿದೆ. ಭಾರತ ಎಂದೆAದಿಗೂ ಒಂದೇ, ಭಾರತ ಎಂದೆAದಿಗೂ ಅವಿಭಾಜ್ಯ ಮತ್ತು ಭಾರತ ಎಂದೆAದಿಗೂ ಅವಿಭಾಜ್ಯವಾಗಿಯೇ ಉಳಿಯುತ್ತದೆ ಎಂದು ಪಟೇಲ್ರವರು ಬಲವಾಗಿ ನಂಬಿದ್ದರು. ಅವರಂತೆಯೇ ಪ್ರಧಾನಿ ನರೇಂದ್ರ ಮೋದಿ ಯವರು ಇಂದು ವಿಕಸಿತ ಭಾರತ್-2047 ರ ದೃಷ್ಟಿಕೋನದ ಮೂಲಕ ಮುಂದಕ್ಕೆ ಸಾಗಿಸುತ್ತಿದ್ದಾರೆ.
ಅಭಿಯಾನದಲ್ಲಿ ದೇಶಾದ್ಯಂತ ಯುವಕರು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಅನೇಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವು ಕೇವಲ ಸ್ಪರ್ಧೆಗಳಲ್ಲ, ಸರ್ದಾರ್ ಪಟೇಲ್ ಅವರ ಏಕತೆಯ ಸಂದೇಶವನ್ನು ಪ್ರತಿಯೊಬ್ಬರ ಹೃದಯಕ್ಕೂ ತಲುಪಿಸುವ ಪ್ರಬಲ ಮಾರ್ಗವಾಗಿದೆ.
ಅಕ್ಟೋಬರ್ 31 ರಿಂದ ನವೆಂಬರ್ 25 ರವರೆಗೆ ದೇಶಾದ್ಯಂತ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆಗಳು ನಡೆಯಲಿವೆ. ಚಿತ್ರದುರ್ಗ ನಗರದಲ್ಲಿಯೂ ಬರುವ ನ. 12 ರಂದು ಬೆಳಿಗ್ಗೆ 08 ಗಂಟೆಗೆ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೂ ಪಾದಯಾತ್ರೆ ಆಯೋಜನೆ ಮಾಡಲಾಗಿದೆ. ಮೈ ಭಾರತ್ ಸ್ವಯಂ ಸೇವಕರು, ಎನ್.ಸಿ.ಸಿ ಕೆಡೆಟ್ಗಳು, ಎನ್ಎಸ್ಎಸ್ ಸ್ವಯಂ ಸೇವಕರು, ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲ ನಾಗರೀಕರು, ನಿವೃತ್ತ ಅಧಿಕಾರಿಗಳು, ಮಾಜಿ ಸೈನಿಕರು, ಕ್ರೀಡಾಪಟಗಳು. ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪಾದಯಾತ್ರೆಗೂ ಮೊದಲು ಶಾಲಾ ಕಾಲೇಜುಗಳಲ್ಲಿ ಸರ್ದಾರ್ ಪಟೇಲ್ ರವರ ಜೀವನ ಮತ್ತು ಆದರ್ಶಗಳ ಕುರಿತು ಚರ್ಚಾ ಸ್ಪರ್ದೆಗಳು, ಪ್ರಬಂದ ಸ್ಪರ್ದೆಗಳು ಹಾಗೂ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತದೆ. ಮತ್ತು ಯುವಕರು ನಶೆ ಮುಕ್ತ ಭಾರತ ನಿರ್ಮಾಣಕ್ಕಾಗಿ ಪ್ರತಿಜ್ಞೆ ಮಾಡಲಿದ್ದಾರೆ.
ಇದೇ ಸಮಯದಲ್ಲಿ ಚಿತ್ರದುರ್ಗದಲ್ಲಿ ಸ್ವದೇಶಿ ಮೇಳವನ್ನು ಆಯೋಜನೆ ಮಾಡಲಾಗಿದೆ. ಯೋಗ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುವುದು, ಯುವಕರ ಭಾಗವಹಿಸುವಿಕೆಯೊಂದಿಗೆ ದೊಡ್ಡ ಪ್ರಮಾಣದಲ್ಲಿ ಸ್ವಚ್ಚತಾ ಅಭಿಯಾನಗಳನ್ನು ನಡೆಸಲಾಗುವುದು. ಉದ್ಯಾನವನಗಳಲ್ಲಿ ಬೀದಿ ನಾಟಕಗಳನ್ನು ಏರ್ಪಡಿಸಲಾಗುವುದು, ಇದರೊಂದಿಗೆ ಪರಿಸರ ಸಂರಕ್ಷಣೆಗಾಗಿ “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನವನ್ನು ತೀವ್ರವಾಗಿ ಪ್ರಚಾರ ಮಾಡಲಾಗುವುದು.
ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಮುಗಿದ ನಂತರ ಪ್ರತಿ ವಲಯದಿಂದ 5 ಪಾದಯಾತ್ರಿಗಳು ರಸ್ತೆ ಮೂಲಕ ನವೆಂಬರ್ 25 ರಂದು ಸರ್ದಾರ್ ಪಟೇಲ್ರ ಹುಟ್ಟೂರು ಕರಮಸದ್ ಊರನ್ನು ತಲುಪಲಿದ್ದಾರೆ.
ನವೆಂಬರ್ 26, ಭಾರತದ ಸಂವಿಧಾನ ದಿನ. ಆ ದಿನ ಸಾವಿರಾರು ಪಾದಯಾತ್ರಿಗಳು ಕರಮಸದ್ನಿಂದ 152 ಕಿಮೀ ಪಾದಯಾತ್ರೆ ಮೂಲಕ ಕೆವಾಡಿಯಾದಲ್ಲಿರುವ ಭಾರತದ ಏಕತೆಯ ಪ್ರತೀಕವಾದ Sಣಚಿಣue oಜಿ Uಟಿiಣಥಿ ಯನ್ನು ತಲುಪಲಿದ್ದಾರೆ. ಇದೊಂದು ಐತಿಹಾಸಿಕ ಏಕತಾ ನಡಿಗೆ ಆಗಲಿದೆ.
ಸರ್ದಾರ್ ಪಟೇಲ್ರವರು ಭಾರತದ ನಕ್ಷೆಯನ್ನು ಒಂದುಗೂಡಿಸಿದರು-ನಾವು ಅವರ ಕನಸುಗಳನ್ನು ಒಂದುಗೂಡಿಸಬೇಕಾಗಿದೆ. ಅವರು ಪ್ರದೇಶಗಳನ್ನು ಒಂದು ಗೂಡಿಸಿದರು- ನಾವು ಹೃದಯಗಳನ್ನು ಮತ್ತು ಮನಸ್ಸುಗಳನ್ನು ಒಂದುಗೂಡಿಸಬೇಕಾಗಿದೆ. ಸರ್ದಾರ್ ಪಟೇಲರ ಅಖಂಡ ಭಾರತದ ಕನಸನ್ನು ಆತ್ಮನಿರ್ಭರ ಭಾರತ ಮತ್ತು ವಿಕಸಿತ ಭಾರತವನ್ನಾಗಿ ಪರಿವರ್ತಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಜಿಲ್ಲೆಯಲ್ಲಿ ನಡೆಯುವ ಏಕತಾ ನಡಿಗೆಯ ಸಂದೇಶ ಮತ್ತು ಅದರ ಸಾರವನ್ನು ಎತ್ತಿ ತೋರಿಸಲು ಮತ್ತು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಏಕತೆಯ ಸಂದೇಶವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಾತನಾಡಿ, ದೇಶದ ಸಮಗ್ರತೆಗೆ ಹಾಗೂ ಏಕೀಕರಣಕ್ಕೆ ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಲು, ಅಭಿಯಾನವು ಉತ್ತಮ ಅವಕಾಶವನ್ನು ನಮಗೆಲ್ಲರಿಗೂ ಕಲ್ಪಿಸಿಕೊಟ್ಟಿದೆ. ನ 12 ರಂದು ನಗರದಲ್ಲಿ ಏರ್ಪಡಿಸಲಾಗಿರುವ ಪಾದಯಾತ್ರೆ ಏಕತಾ ನಡಿಗೆಯಲ್ಲಿ ಎಲ್ಲರೂ ಪಾಲ್ಗೊಂಡು, ದೇಶದ ಮೂಲೆ, ಮೂಲೆ, ಹಳ್ಳಿ ಹಳ್ಳಿಗಳಿಗೆ ಏಕತೆಯ ಸಂದೇಶ ಪ್ರತಿಧ್ವನಿಸುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ, ಮೇರಾ ಯುವ ಭಾರತ್ನ ಜಿಲ್ಲಾ ಯುವಜನ ಅಧಿಕಾರಿ ಸ್ನೇಹಲತಾ, ಗಣ್ಯರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.